ಬೆಂಗಳೂರು: ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದಿಂದ ರಾಜ್ಯದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅನುಭವ ಮಂಟಪಕ್ಕೆ 50 ಕೋಟಿ ರೂ. ಅನುದಾನಕ್ಕೆ ಮಂಜೂರು ಮಾಡಲಾಗಿದೆ.
50 ಕೋಟಿ ರೂಪಾಯಿ ಪೈಕಿ ತಕ್ಷಣ 20 ಕೋಟಿ ರೂ.ಬಿಡುಗಡೆಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
12ನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಜಗತ್ತಿನ ಮೊದಲನೇ ಪಾರ್ಲಿಮೆಂಟ್ ‘ಅನುಭವ ಮಂಟಪ’ ಕುರಿತು ಶರಣರ ಜೀವನದ ಬಗ್ಗೆ ಹಾಗೂ ಅವರು ಸಾರಿದ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಮಾದರಿಯಲ್ಲಿ ಒಂದು ವಿನೂತನ ಅನುಭವ ಮಂಟಪ ನಿರ್ಮಾಣ ಮಾಡುವ ಸದುದ್ದೇಶದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.
Advertisement