ಬೆಂಗಳೂರು: ಕೊಲೆ‌ ಆರೋಪಿ ಮೇಲೆ ಪೊಲೀಸ್ ಗುಂಡೇಟು

ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ‌‌ ಪರಾರಿಯಾಗಿದ್ದ ಓರ್ವ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ತಿಲಕ್ ನಗರದ ಅರಸು ಕಾಲೋನಿಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮಂಗಳಮುಖಿ ಸೇರಿದಂತೆ ನಾಲ್ವರ ಗುಂಪು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ‌‌ ಪರಾರಿಯಾಗಿದ್ದ ಓರ್ವ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ತಿಲಕ್ ನಗರದ ಅರಸು ಕಾಲೋನಿಯಲ್ಲಿ ನಡೆದಿದೆ.

ಆರೋಪಿ ತಬರೇಜ್ ಬಲಗಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರು ಈತನನ್ನು ಬಂಧಿಸಲು ಮುಂದಾಗಿದಾಗ ಪೊಲೀಸರ ಮೇಲೆ ಆತ ಹಲ್ಲೆ ಮಾಡಿದ್ದಾನೆ. ಶರಣಾಗಲು ತಿಳಿಸಿ ಗಾಳಿಯಲ್ಲಿ ಗುಂಡು ಹಾರಿಸಿದರೂ, ಆತ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಗಾಳಿಯಲ್ಲಿ ಗುಂಡು ಹಾರಿಸಿ ಆತ್ಮ ರಕ್ಷಣೆಗಾಗಿ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಆರೋಪಿ ತಬರೇಜ್ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com