ಬೆಂಗಳೂರು: ಸಾವಿರಾರು ಕೋಟಿ ವಂಚನೆ ನಡೆಸಿರುವ ಐಎಂಎ ಕಂಪನಿಯ ಎಲ್ಲಾ ಸ್ಥಿರ-ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಸಚಿವರು 17 ವಿವಿಧ ಆಸ್ತಿಗಳನ್ನು ವಶಕ್ಕೆ ಪಡೆಯಲು ಆದೇಶಿಸಲಾಗಿದೆ. 81 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 50ಸಾವಿರಕ್ಕೂ ಹೆಚ್ಚು ನಕಲಿ ಚಿನ್ನದ ಗಟ್ಟಿ,2.85 ಕೋಟಿ ರೂ. ನಗದು, 8.86 ಕೋಟಿ ರೂ. ಡಿಡಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ಸುಮಾರು 21.73 ಕೋಟಿ ರೂ.ನ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.
Advertisement