ಶಿವಮೊಗ್ಗ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಮಾದಾಪುರ ಗ್ರಾಮದಲ್ಲಿ ನಡೆದಿದೆ.
ಮಾದಾಪುರದ ಈಶ್ವರ ಶೇಟ್ ಎಂಬುವರ ಪುತ್ರಿ ಪೂಜಾ(17) ಮೃತ ವಿದ್ಯಾರ್ಥಿನಿ.
ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ಪೂಜಾ, ಇಂದು ಬೆಳಗ್ಗೆ ತನ್ನ ಮನೆ ಎದುರಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪೂಜಾ ನಾಪತ್ತೆಯಾಗಿರುವುದರ ಬಗ್ಗೆ ಆಕೆಯ ಪೋಷಕರು ಸೋಮವಾರ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಯಾರೋ ಪೂಜಾಳನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವುದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Advertisement