ಹಾಸನ: ನನಗೆ ಹೈಕೋರ್ಟ್ ನಿಂದ ನೋಟೀಸ್ ಬಂದಿದೆ, ಅದಕ್ಕಾಗಿ ನಾನು ಹೆದರಿಕೊಂಡಿಲ್ಲ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸರಿಯಾದ ದಾಖಲೆಗಳೊಂದಿಗೆ ಕೋರ್ಟ್ ಗೆ ಹಾಜರಾಗುತ್ತೇನೆ, ಎಲ್ಲಾ ಪ್ರಮಾಣ ಪತ್ರಗಳನ್ನು ಕೋರ್ಟ್ ಗೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ನಾನು ಗೆದ್ದ ದಿನದಿಂದ ನನ್ನ ರಾಜಕೀಯ ವೈರಿಗಳು ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವಮತಹ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಜ್ವಲ್ ಆರೋಪಿಸಿದ್ದಾರೆ. ಆದರೆ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ಹಾಸನ ಜನತೆಗೆ ತಿಳಿದಿದೆ ಎಂದು ಹೇಳಿದ್ದಾರೆ.
Advertisement