ಇಂದು ಅಥವಾ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ: ಬಿ.ಎಸ್. ಯಡಿಯೂರಪ್ಪ

ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಿಎಂ ಬಿಎಸ್ ಯಡಿಯೂರಪ್ಪ (ಸಂಗ್ರಹ ಚಿತ್ರ)

ಬೆಂಗಳೂರು: ಇಂದು ಇಲ್ಲವೇ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರ ವಿಚಾರವಾಗಿ ಸಂಸದ ಪ್ರಹ್ಲಾದ್ ಜೋಷಿ ತಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕರ್ನಾಟಕವೂ ಸೇರಿದಂತೆ ದೇಶದ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದರು.

ಚುನಾವಣಾ ಆಯೋಗ 15 ಕ್ಷೇತ್ರಗಳ ಉಪಚುನಾವಣೆಗೆ ಮತ್ತೆ ದಿನಾಂಕ ಘೋಷಣೆ ಮಾಡಿದೆ. ಚುನಾವಣೆ ಸಂಬಂಧ ಪಕ್ಷದ ಮುಖಂಡರ ಜೊತೆ ಚರ್ಚಿಸಲಾಗುತ್ತಿದೆ. ಪಕ್ಷ ಚುನಾವಣೆ ಎದುರಿಸಲು‌ ಸಿದ್ಧವಿದೆ ಎಂದು ತಿಳಿಸಿದರು.

ಅಕ್ಟೋಬರ್ 3 ರಂದು‌ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ವಿಜಯನಗರ ಜಿಲ್ಲಾ ರಚನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ. ಬಳ್ಳಾರಿ ಜಿಲ್ಲೆ ವಿಭಜನೆ ಸಂಬಂಧ ಜಿಲ್ಲೆಯ ಪಕ್ಷದ ನಾಯಕರನ್ನೆಲ್ಲ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com