ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಎರಡು ಯುವಕರ ಗುಂಪುಗಳ ಮಾರಾಮಾರಿ

ದಸರಾ ಆಚರಣೆ ಉದ್ಘಾಟನೆಗೊಂಡ ಮೊದಲ ದಿನವೇ ಯುವಕರ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ದಸರಾ ಆಚರಣೆಗೆ ಒಂದು ಕಪ್ಪು ಚುಕ್ಕೆ ಇಟ್ಟಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ದಸರಾ ಆಚರಣೆ ಉದ್ಘಾಟನೆಗೊಂಡ ಮೊದಲ ದಿನವೇ ಯುವಕರ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ದಸರಾ ಆಚರಣೆಗೆ ಒಂದು ಕಪ್ಪು ಚುಕ್ಕೆ ಇಟ್ಟಿದ್ದಾರೆ. 

ಪಾನಮತ್ತರಾಗಿದ್ದ 10 ಯುವಕರ ತಂಡ ಇಬ್ಬರು ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಲ್ಲದೆ, ಎರಡು ಬೈಕ್​ಗಳನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ಭಾನುವಾರ ರಾತ್ರಿ 9 ಗಂಟೆಯಲ್ಲಿ ಈ ಹೊಡೆದಾಟ ನಡೆದಿದ್ದು, ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಜನರು ಮೂಕಪ್ರೇಕ್ಷಕರಾಗಿ ನಿಂತಿದ್ದರು ಎನ್ನಲಾಗಿದೆ.

ನಡುರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಹಲ್ಲೆ ಮಾಡುವ 10 ಯುವಕರ ತಂಡ ಮನಸೋಇಚ್ಛೆ ಥಳಿಸಿದೆ. ಅಂದಾಜು ಅರ್ಧ ಗಂಟೆಗೂ ಹೆಚ್ಚುಕಾಲ ಹಲ್ಲೆ ನಡೆಸಲಾಗಿದೆ. ಗಲಾಟೆಗೆ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಲ್ಲೆ ಮಾಡುತ್ತಿದ್ದ ತಂಡದ ಕೆಲ ಯುವಕರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. ಕೆ.ಆರ್​.ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com