ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳ 50 ವರ್ಷ ಮೇಲ್ಪಟ್ಟ ಅಧಿಕಾರಿಗಳು, ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯ್ತಿ ನೀಡಲಾಗಿದೆ.
ಆದರೆ, ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ 50 ವರ್ಷದೊಳಗಿನ ಅಧಿಕಾರಿಗಳು, ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾರ್ಮಿಕ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ಆದೇಶ ಹೊರಡಿಸಿದ್ದಾರೆ.
ಇಲಾಖೆಯ ಪ್ರತಿ ನೌಕರರು ಕೂಡ ಏ. 1ರಿಂದ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಾ. 31ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.
Advertisement