ಸಂಗ್ರಹ ಚಿತ್ರ
ರಾಜ್ಯ
ಕೋವಿಡ್-19 ಹಿನ್ನೆಲೆ: ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿ ಆದೇಶ ಹೊರಡಿಸದಂತೆ ಸೂಚನೆ
ದೇಶಾದ್ಯಂತ ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳಿಗೆ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸದಂತೆ ರಾಜ್ಯ ಹಣಕಾಸು ಇಲಾಖೆ ಸೂಚಿಸಿದೆ.
ಬೆಂಗಳೂರು: ದೇಶಾದ್ಯಂತ ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳಿಗೆ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸದಂತೆ ರಾಜ್ಯ ಹಣಕಾಸು ಇಲಾಖೆ ಸೂಚಿಸಿದೆ.
ಒಂದು ವೇಳೆ ಈಗಾಗಲೇ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸಿದ್ದರೆ ಕೂಡಲೇ ಹಿಂದಕ್ಕೆ ಪಡೆಯುವಂತೆ ಹಣಕಾಸು ಇಲಾಖೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆ.
ಆಡಳಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳಿಗೆ ಈ ಸೂಚನೆ ನೀಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ