ಮಂಗಳೂರು: ಆಶಾ ಕಾರ್ಯಕರ್ತೆಗೆ ನಿಂದಿಸಿ, ಬೆದರಿಕೆ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಆಶಾ ಕಾರ್ಯಕರ್ತೆಗೆ ನಿಂದಿಸಿ, ಬೆದರಿಕೆ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಆಶಾ ಕಾರ್ಯಕರ್ತೆಗೆ ನಿಂದಿಸಿ, ಬೆದರಿಕೆ, ಇಬ್ಬರು ಆರೋಪಿಗಳ ಬಂಧನ

 ಕರ್ತವ್ಯ ನಿರತ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. 
Published on

ಮಂಗಳೂರು,: ಕರ್ತವ್ಯ ನಿರತ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಬಂಧಿತ ಆರೋಪಿಗಳು.

ಇದೇ ಮಾರ್ಚ್ ಒಂದರಂದು ಆರೋಗ್ಯ ಇಲಾಖೆಯ ಅಡಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ಅಮ್ಟಾಡಿ ಗ್ರಾಮದ ತುಳಸಿ (48) ಎಂಬವರು ಕೊರೋನಾ ವೈರಸ್ ಮುಂಜಾಗೃತಾ ಕರ್ತವ್ಯದ ನಿಮಿತ್ತ ವಿದೇಶದಿಂದ ಆಗಮಿಸಿರುವ ಕಿನ್ನಿಬೆಟ್ಟು ಪರಿಸರದ ನಿತೇಶ ಹಾಗೂ ಕಲಾಯಿ ಪರಿಸರದ ಜಯಂತ ಎಂಬವರ ಆರೋಗ್ಯವನ್ನು ಮೊಬೈಲ್ ಮೂಲಕ ಕರೆ ಮಾಡಿ ವಿಚಾರಿಸಿದ್ದಾರೆ. 

ಆ ದಿನ ಸಂಜೆ ಸಮಯ ಸುಮಾರು 6 ಗಂಟೆಗೆ ಕರ್ತವ್ಯದಲ್ಲಿದ್ದಾಗ ವಿದೇಶದಿಂದ ಆಗಮಿಸಿರುವ ನಿತೇಶ ಎಂಬಾತನ ಸಂಬಂಧಿ ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಎಂಬವರು ಆಶಾ ಕಾರ್ಯಕರ್ತೆಗೆ ಮೊಬೈಲ್ ಮೂಲಕ ಕರೆಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಆಶಾ ಕಾರ್ಯಕರ್ತೆಗೆ ಪೊಲೀಸರಿಗೆ ದೂರು ನೀಡಿದ್ದರು.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com