ಇಂದು ಮಹಾವೀರ ಜಯಂತಿ:ಮುಖ್ಯಮಂತ್ರಿ ಶುಭಾಶಯ

ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಮಹಾವೀರರ ಜಯಂತಿ ಇಂದು.
ಇಂದು ಮಹಾವೀರ ಜಯಂತಿ:ಮುಖ್ಯಮಂತ್ರಿ ಶುಭಾಶಯ
Updated on

ಬೆಂಗಳೂರು: ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಮಹಾವೀರರ ಜಯಂತಿ ಇಂದು.

ಈ ಸಂದರ್ಭದಲ್ಲಿ ನಾಡಿನ ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ವರ್ಧಮಾನ್ ಮಹಾವೀರರ ಶಾಂತಿ ತತ್ವಗಳಿಗೆ ನಮನಗಳು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಭಾಶಯ ತಿಳಿಸಿದ್ದಾರೆ.

ಲಾಕ್ ಡೌನ್ ಮಧ್ಯೆ ದೇಶಾದ್ಯಂತ ಇಂದು ಭಗವಾನ್‌ ಮಹಾವೀರರ ಜಯಂತಿಯನ್ನು ವೈಭವಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹಾವೀರರು ಅಹಿಂಸೆ, ಸತ್ಯ, ಅಚೌರ್ಯ, ಬ್ರಹ್ಮಚರ್ಯ ಹಾಗೂ ಅಪರಿಗ್ರಹವೆಂಬ ಪಂಚಶೀಲ ತತ್ತ್ವವನ್ನು ಬೋಧಿಸಿದರು. ಭಗವಾನ್‌ ಮಹಾವೀರರು ತಮ್ಮ ಬೋಧನೆಗಳ ಮೂಲಕ ಜನರಲ್ಲಿ ವೈಚಾರಿಕ ಬದಲಾವಣೆ ಉಂಟು ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com