ಬೆಂಗಳೂರು: ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಮಹಾವೀರರ ಜಯಂತಿ ಇಂದು.
ಈ ಸಂದರ್ಭದಲ್ಲಿ ನಾಡಿನ ಗಣ್ಯರು ಜನತೆಗೆ ಶುಭಾಶಯ ತಿಳಿಸಿದ್ದಾರೆ. ವರ್ಧಮಾನ್ ಮಹಾವೀರರ ಶಾಂತಿ ತತ್ವಗಳಿಗೆ ನಮನಗಳು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಭಾಶಯ ತಿಳಿಸಿದ್ದಾರೆ.
ಲಾಕ್ ಡೌನ್ ಮಧ್ಯೆ ದೇಶಾದ್ಯಂತ ಇಂದು ಭಗವಾನ್ ಮಹಾವೀರರ ಜಯಂತಿಯನ್ನು ವೈಭವಪೂರ್ಣವಾಗಿ ಆಚರಿಸಲಾಗುತ್ತಿದೆ. ಮಹಾವೀರರು ಅಹಿಂಸೆ, ಸತ್ಯ, ಅಚೌರ್ಯ, ಬ್ರಹ್ಮಚರ್ಯ ಹಾಗೂ ಅಪರಿಗ್ರಹವೆಂಬ ಪಂಚಶೀಲ ತತ್ತ್ವವನ್ನು ಬೋಧಿಸಿದರು. ಭಗವಾನ್ ಮಹಾವೀರರು ತಮ್ಮ ಬೋಧನೆಗಳ ಮೂಲಕ ಜನರಲ್ಲಿ ವೈಚಾರಿಕ ಬದಲಾವಣೆ ಉಂಟು ಮಾಡಿದರು.
Advertisement