ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಾರಕಬಂಡೆ ಕಾವಲ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 8 ಎಕರೆ ಕಾಡು ಬೆಂಕಿಗಾಹುತಿ

ಯಲಹಂಕ ಸಮೀಪವಿರುವ ಜಾರಕಬಂಡೆಕಾವಲ್ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹಲವು ಎಕರೆಯಲ್ಲಿ ಗಿಡ ಮರಗಳು ಸುಟ್ಟು ಕರಕಲಾಗಿವೆ.

ಬೆಂಗಳೂರು:ಯಲಹಂಕ ಸಮೀಪವಿರುವ ಜಾರಕಬಂಡೆಕಾವಲ್ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಹಲವು ಎಕರೆಯಲ್ಲಿ ಗಿಡ ಮರಗಳು ಸುಟ್ಟು ಕರಕಲಾಗಿವೆ.

ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಅರಣ್ಯಾಧಿಕಾರಿಗಳಿಗೆ 2 ಗಂಟೆ ಸಮಯ ಬೇಕಾಯಿತು, ವಿವಿಧ ಪ್ರದೇಶಗಳಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು 450 ಎಕರೆ ಇರುವ ಅರಣ್ಯ ವ್ಯಾಪ್ತಿಯಲ್ಲಿ 8 ಎಕರೆ ಕಾಡು ಬೆಂಕಿಗಾಹುತಿಯಾಗಿದೆ

ಅರಣ್ಯ ಪ್ರದೇಶದಲ್ಲಿ ನಡೆದಿದ್ದ     ಒತ್ತುವರಿಯನ್ನು ಇತ್ತೀಚೆಗೆ ಸರ್ಕಾರ ವ ಶಪಡಿಸಿಕೊಂಡಿತ್ತು. ಲಾಕ್ ಡೌನ್ ಸಮಯವನ್ನು ದುರುಪಯೋಗ ಪಡಿಸಿಕೊಂಡಿರುವ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರ ಎಂದು ಬೆಂಗಳೂರು ನಗರ ಅರಣ್ಯ ಇಲಾಖೆ ಉಪ ಸಂರಕ್ಷಕ ಸಿದ್ದರಾಮಣ್ಣ ಹೇಳಿದ್ದಾರೆ.
 

Related Stories

No stories found.

Advertisement

X
Kannada Prabha
www.kannadaprabha.com