ಬೆಂಗಳೂರು:ಕೊರೋನಾ ಸೋಂಕು ತಡೆಗಟ್ಟುವಿಕೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಿಧಿಸಲಾಗಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ.
ಮುಂದೆ ಪರಿಸ್ಥಿತಿ ಯಾವ ರೀತಿ ಇರುತ್ತದೆ ಎಂದು ಅಂದಾಜಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಟಿಕೆಟ್ ಬುಕ್ಕಿಂಗ್ ನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ. ಇದುವರೆಗೆ ಬುಕ್ಕಿಂಗ್ ಮಾಡಿರುವವರ ಟಿಕೆಟ್ ಗಳನ್ನು ರದ್ದುಗೊಳಿಸಲಾಗಿದ್ದು ಅವರ ಹಣವನ್ನು ಹಿಂತಿರುಗಿಸಲಾಗುತ್ತದೆ.
ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೆ ಟಿಕೆಟ್ ಬುಕ್ಕಿಂಗ್ ನ್ನು ರದ್ದುಗೊಳಿಸಲಾಗಿದೆ ಎಂದು ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಇದೇ ವೇಳೆ ಕೆಎಸ್ಆರ್ ಟಿಸಿ ಅವಶ್ಯಕ ಮತ್ತು ತುರ್ತು ಸೇವೆಯ ಸಿಬ್ಬಂದಿಗಳಿಗೆ ಮೊಬೈಲ್ ಸ್ಯಾನಿಟೈಸರ್ ಬಸ್ "ಸಾರಿಗೆ ಸಂಜೀವಿನಿ"ಯನ್ನು ಆರಂಭಿಸಿದೆ.
Advertisement