ಬೆಂಗಳೂರು: ಅಮೆರಿಕಾದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮೀರಿ ಹಬ್ಬುತ್ತಿದೆ. ಸಾವಿರಾರು ಮಂದಿ ನಿತ್ಯವೂ ಸಾಯುತ್ತಿದ್ದಾರೆ. ಅವರಲ್ಲಿ ಭಾರತೀಯರು ಕೂಡ ಸೇರಿದ್ದಾರೆ.
ಈ ಹೊತ್ತಿನಲ್ಲಿ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಿ ಸ್ಥೈರ್ಯ ತುಂಬಿದ್ದಾರೆ.
ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ಉತ್ತರ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರನ್ನು ಉದ್ದೇಶಿಸಿ ನಿನ್ನೆ ಸಿಎಂ ಯಡಿಯೂರಪ್ಪ ಜೂಮ್ ವಿಡಿಯೊ ಕಾನ್ಫರೆನ್ಸ್ ಕಾಲ್ ಮೂಲಕ ಮಾತನಾಡಿ ಸ್ಥೈರ್ಯ ತುಂಬಿದರು. ನಗರದ ಕೆಲವು ಬಿಜೆಪಿ ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಜಾತಿ-ಧರ್ಮಗಳನ್ನು ವಿಚಾರಿಸಿ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹಸಿದ ಹೊಟ್ಟೆಗಳಿಗೆ ಈ ಸಂದರ್ಭದಲ್ಲಿ ಆಹಾರ ಮುಖ್ಯವೇ ಹೊರತು ಜಾತಿ, ಧರ್ಮ ಊರುಗಳಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
Advertisement