ಆನಂದ್ ಸಿಂಗ್
ಆನಂದ್ ಸಿಂಗ್

ಹೊಸಪೇಟೆ: ಸಚಿವ ಆನಂದ್ ಸಿಂಗ್'ರ ಆಹಾರ ಕಿಟ್ ಬಳಸಿ ಕೋಮು ಪ್ರಚೋದನೆಗೆ ಮುಂದಾಗಿದ್ದ ಯುವಕನ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್‌ ಹಂಚಿಕೆ ಮಾಡಿದ ಶಿವರಾಜ್ ಎಂಬ ಯುವಕನನನ್ನು ಹಂಪಿ ಪೊಲೀಸರು ಬಂಧಿಸಿದ್ದಾರೆ. 
Published on

ಹೊಸಪೇಟೆ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್‌ ಹಂಚಿಕೆ ಮಾಡಿದ ಶಿವರಾಜ್ ಎಂಬ ಯುವಕನನನ್ನು ಹಂಪಿ ಪೊಲೀಸರು ಬಂಧಿಸಿದ್ದಾರೆ. 

ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ನಿವಾಸಿ ಶಿವರಾಜ ನನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. 

ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಬಡವರಿಗೆ ವಿತರಿಸಲು ಆಹಾರದ ಕಿಟ್‌ಗಳನ್ನು ಸಿದ್ಧಪಡಿಸುತ್ತಿರುವ ಚಿತ್ರಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ.

ಆನಂದ್ ಸಿಂಗ್‌ ಮುಸ್ಲಿಮರಿಂದ ಕಿಟ್‌ಗಳನ್ನು ತಯಾರಿಸುತ್ತಿದ್ದಾರೆ. ಅದರಿಂದ ಕೊರೊನಾ ಸೋಂಕು ತಗುಲಬಹುದು. ಹಾಗಾಗಿ ಯಾರೂ ಕಿಟ್‌ಗಳನ್ನು ಪಡೆಯಬಾರದು ಎಂದು ಶಿವರಾಜ ಪೋಸ್ಟ್‌ ಮಾಡಿದ್ದ ಈ ಸಂಭಂದ ಬಿಜೆಪಿ ಕಾರ್ಯಕರ್ತ ಬಸವರಾಜ ಎನ್ನುವವರು ಭಾನುವಾರ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com