ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್
ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್

ಕೋವಿಡ್ ಆತಂಕ: ಕೊಡಗಿನಲ್ಲಿ ಗುಣಮುಖ ಹೊಂದಿದ್ದ ವ್ಯಕ್ತಿ ಮತ್ತೆ ಆಸ್ಪತ್ರೆಗೆ ದಾಖಲು

 ಕೊವಿದ್‍ -19 ನಿಂದ ಗುಣಮುಖನಾಗಿ ಮನೆಗೆ ಮರಳಿದ್ದ ವಿರಾಜಪೇಟೆ ಸಮೀಪದ ಕೆಟುಮೊಟ್ಟೆ ನಿವಾಸಿ ಜ್ವರದ ಕಾರಣ ಬುಧವಾರ ಮಧ್ಯಾಹ್ನ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾನೆ. 

ಮಡಿಕೇರಿ: ಕೊವಿದ್‍ -19 ನಿಂದ ಗುಣಮುಖನಾಗಿ ಮನೆಗೆ ಮರಳಿದ್ದ ವಿರಾಜಪೇಟೆ ಸಮೀಪದ ಕೆಟುಮೊಟ್ಟೆ ನಿವಾಸಿ ಜ್ವರದ ಕಾರಣ ಬುಧವಾರ ಮಧ್ಯಾಹ್ನ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಆಸ್ಪತ್ರೆಗೆ ತಾನಾಗಿಯೇ ದಾಖಲಾದ ವ್ಯಕ್ತಿ ಕೋವಿಡ್ -19 ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಗಂಟಲು ದ್ರವ ಮತ್ತು ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಗುರುವಾರ ಬೆಳಿಗ್ಗೆ ವೇಳೆಗೆ ಹೊರಬರುವ ಸಾಧ್ಯತೆ ಇದೆ.

ಏಪ್ರಿಲ್ 7 ರಂದು ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ವ್ಯಕ್ತಿ ಮನೆಯಲ್ಲೇ ಇದ್ದರು. ಒಂದು ವಾರದ ನಂತರ ಆತನಲ್ಲಿ ಮತ್ತೆ ಜ್ವರ ಕಾಣಿಸಿಕೊಂಡಿದೆ. ವ್ಯಕ್ತಿಯು ತನ್ನ ಮನೆಯಿಂದ ಹೊರಹೋಗಿಲ್ಲವಾದ್ದರಿಂದ ಜನರು ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com