ಲಾಕ್ ಡೌನ್ ಮಧ್ಯೆ ಓಪನ್ ಆಗಿದ್ದ ಬಾರ್ ಮೇಲೆ ದಾಳಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ

ಲಾಕ್ ಡೌನ್ ಮಧ್ಯೆಯೂ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.
ಅಬಕಾರಿ ಅಧಿಕಾರಿಗಳ ತಂಡ
ಅಬಕಾರಿ ಅಧಿಕಾರಿಗಳ ತಂಡ
Updated on

ಹೂವಿನಹಡಗಲಿ:ಲಾಕ್ ಡೌನ್ ಮಧ್ಯೆಯೂ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.

ಹೂವಿನಹಡಗಲಿ ತಾಲೂಕಿನ ಹ್ಯಾರಡ ಗ್ರಾಮದ  ಶಾಂತಿ ಬಾರ್  &   ರೆಸ್ಟೋರೆಂಟ್ ಮೇಲೆ  ಹೂವಿನಹಡಗಲಿ ಅಬಕಾರಿ ಉಪ -ನಿರೀಕ್ಷಕಿ ನೇತ್ರಾ ಉಪ್ಪಾರ ನೇತೃತ್ವದಲ್ಲಿ ದಾಳಿ ನಿನ್ನೆ ರಾತ್ರಿ  ದಾಳಿ ನಡೆಸಲಾಗಿದೆ.

ದಾಳಿ ವೇಳೆಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ  7 ಲಕ್ಷದ 32 ಸಾವಿರದ 475 ರೂ. ಮೌಲ್ಯದ ಮದ್ಯ ಹಾಗೂ ಮದ್ಯ ಸಾಗಾಟಕ್ಕೆ ಬಳಸಿದ್ದ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ.

ಬಂಧನ ಭೀತಿಯಲ್ಲಿ ಬಾರ್ ಮಾಲೀಕ ಪ್ರಭಾಕರ್ ಲಕ್ಕಪ್ಪನವರ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com