ಬಳ್ಳಾರಿ: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆಯಾಗಿರುವುದಾಗಿ ತಿಳಿದುಬಂದಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದ ಇಬ್ಬರು ಸಚಿವರುಗಳಾಗ ಬಿ.ಶ್ರೀರಾಮುಲು ಹಾಗೂ ಆನಂದ್ ಸಿಂಗ್ ಇಬ್ಬರೂ ಸಾಮಾಜಿಕ ಅಂತರ ಮರೆತು ಲಾಕ್'ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಹೊಸಪೇಟೆಯಲ್ಲಿ ಸಾರ್ವಜನಿಕರಿಗೆ ರೂ.7 ಕೋಟಿ ವೆಚ್ಚದಲ್ಲಿ ಆನಂದ್ ಸಿಂಗ್ ಅವರು ಆಹಾರ ಕಿಟ್ ವಿತರಣೆ ಮಾಡಿದ್ದು, ಈ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಗುಂಪುಗುಂಪಾಗಿ ಸೇರಿಕೊಂಡಿರುವುದು ಕಂಡುಬಂದಿದೆ. ಈ ಮೂಲಕ ಸಚಿವ ಲಾಕ್'ಡೌನ್ ಉಲ್ಲಂಘನೆ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಇದೇ ರೀತಿ ಬಳ್ಳಾರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರೂ ಕೂಡ ಜನರಿಗೆ ಆಹಾರ ಕಿಟ್ ಗಳನ್ನು ನೀಡಿದ್ದು, ಈ ವೇಳೆ ಕೂಡ ಜನರು ಉಚಿತ ದಿನಸಿ ಸಾಮಾಗ್ರಿಗಳನ್ನು ತೆಗೆದುಕೊಳ್ಳಲು ಮುಗಿಬಿದ್ದಿರುವುದು ಕಂಡು ಬಂದಿದೆ.
Advertisement