ದಿನಗೂಲಿ ಕಾರ್ಮಿಕರಿಗೆ ರೂ.10,000 ನೀಡಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ಲಾಕ್'ಡೌನ್ ಪರಿಣಾಮ ದಿನಗೂಲಿ ಕಾರ್ಮಿಕರು, ಕ್ಯಾಬ್ ಚಾಲಕರು ಸೇರಿದಂತೆ ಇನ್ನಿತರೆ ಬಡವರ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇಂತಹವರಿಗೆ ಕೂಡಲೇ ಆರ್ಥಿಕ ಬೆಂಬಲ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ. 
ಡಿಕೆ. ಶಿವಕುಮಾರ್
ಡಿಕೆ. ಶಿವಕುಮಾರ್
Updated on

ಬೆಂಗಳೂರು: ಲಾಕ್'ಡೌನ್ ಪರಿಣಾಮ ದಿನಗೂಲಿ ಕಾರ್ಮಿಕರು, ಕ್ಯಾಬ್ ಚಾಲಕರು ಸೇರಿದಂತೆ ಇನ್ನಿತರೆ ಬಡವರ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇಂತಹವರಿಗೆ ಕೂಡಲೇ ಆರ್ಥಿಕ ಬೆಂಬಲ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಲಾಕ್'ಡೌನ್ ಪರಿಣಾಮ ದಿನಗೂಲಿ ಕಾರ್ಮಿಕರು, ಕ್ಯಾಬ್ ಚಾಲಕರು ಸೇರಿದಂತೆ ಇನ್ನಿತರೆ ಬಡವರ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಇಂತಹವರ ಬ್ಯಾಂಕ್ ಖಾತೆಗಳಿಗೆ ರೂ.10,000 ಜಮಾವಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಲಾಕ್'ಡೌನ ಅಂತ್ಯಗೊಳ್ಳವವರೆಗೂ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಸಹಾಯ ಮಾಡಬೇಕಿದೆ. ಬಡವರಿಗೆ ಸಹಾಯ ಮಾಡುವುದು ಸರ್ಕಾರದ ಜವಾಬ್ದಾರಿ. ಆದರೆ, ಪ್ರಧಾನಮಂತ್ರಿ ಯಾಗಲೀ, ಮುಖ್ಯಮಂತ್ರಿಗಳಾಗಲೀ ಈ ಬಗ್ಗೆ ಮಾತನಾಡದೇ ಇರುವುದು ದುರಾದೃಷ್ಟಕರ. ಭಾನುವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದು, ಬಡವರ ಪರ ಆರ್ಥಿಕ ಸಹಾಯ ಮಾಡುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. 

ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಹಿಂದೆ ಘೋಷಣೆ ಮಾಡಿದ್ದ ಆರ್ಥಿಕ ಸಹಾಯ ಇನ್ನೂ ಬಡವರ ಕೈ ತಲುಪುತ್ತಿಲ್ಲ. ಹೀಗಾಗಿ ಸಾಕಷ್ಟು ಜನರು ಸಂಕಷ್ಟ ಎದುರಿಸುತ್ತಿದ್ದಾರೆ. 1.65 ಕೋಟಿ ಕಾರ್ಮಿಕರ ಕುರಿತಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಈ ಕುರಿತು ಸರ್ಕಾರ ಸರ್ವಪಕ್ಷ ಸಭೆ ಕರೆದು ಮಾತುಕತೆ ನಡೆಸಲಿ ಇಲ್ಲವೇ ವಿಧಾನಸಭೆ ಅಧಿವೇಶನ ಕರೆಯಲಿ. ಜನರಿಗೆ ಸಹಾಯ ಮಾಡುವ ವಿಚಾರ ಬಂದರೆ ಸರ್ಕಾರಕ್ಕೆ ನಾವು ಬೆಂಬಲ ನೀಡುತ್ತೇವೆ. ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com