ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ ನಿಧನ

ಕನ್ನಡದ ಖ್ಯಾತ ಸಾಹಿತಿ ಚಂದ್ರಕಾಂತ ಕುಸನೂರ ಅವರು ಕಳೆದ ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.
ಚಂದ್ರಕಾಂತ ಕುಸನೂರ
ಚಂದ್ರಕಾಂತ ಕುಸನೂರ
Updated on

ಬೆಂಗಳೂರು:ಕನ್ನಡದ ಖ್ಯಾತ ಸಾಹಿತಿ ಚಂದ್ರಕಾಂತ ಕುಸನೂರ ಅವರು ಕಳೆದ ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳು ಹಾಗು ರಂಗಕರ್ಮಿಗಳು.ಇವರು 1931ರಲ್ಲಿ ಕಲಬುರಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ, ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ.ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.ಕಲಬುರಗಿಯಲ್ಲಿ "ರಂಗ ಮಾಧ್ಯಮ"ಎಂಬ ನಾಟಕ ಸಂಸ್ಥೆಯ ಸ್ಥಾಪಕರಾಗಿದ್ದರು. ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದರು.

1975ರಲ್ಲಿ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದೆ.1992 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ನೀಡಲಾಗಿದೆ.2006ನೆಯ ಸಾಲಿನ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ದೊರೆತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com