ಮೂಡಿಗೆರೆ: ಆಸ್ತಿಗಾಗಿ ಅಣ್ಣನಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ತಮ್ಮ ಸೆರೆ

ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿ ಆ ಜಗಳ ಅಣ್ಣನ ಕೊಲೆಯೊಂದಿಗೆ ಅಂತ್ಯಕಂಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ.  
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೂಡಿಗೆರೆ: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿ ಆ ಜಗಳ ಅಣ್ಣನ ಕೊಲೆಯೊಂದಿಗೆ ಅಂತ್ಯಕಂಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ನಡೆದಿದೆ. 

ಮೂಡಿಗೆರೆ ತಾಲೂಕಿನ ಚೇಗು ಗ್ರಾಮದಲ್ಲಿ ಸೋಮವಾರ ರಾತ್ರಿ ಗ್ರಾಮದ ನಿವಾಸಿ ಮಂಜಯ್ಯ (58) ಎಂಬಾತನ ಮೇಲೆ ಆತನ ತಮ್ಮನೇ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಸಧ್ಯ ಆರೋಪಿ ತಮ್ಮ ಲಕ್ಷ್ಮಣನನ್ನು ಪೋಲೀಸರು ಬಂಧಿಸಿದ್ದಾರೆ.

ಆಸ್ತಿ ವಿಚಾರವಾಗಿ ಇಬ್ಬರೂ ಜಗಳ ಕಾಯುತ್ತಿದ್ದರು. ಬಹಳ ದಿನಗಳಿಂದ ಇಬ್ಬರ ನಡುವೆ ವೈಮನಸ್ಯವಿದ್ದು ಸೋಮವಾರ ರಾತ್ರಿ ಸಹ ಇದೇ ವಿಚಾರ ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ. ಆ ವೇಳೆ ಲಕ್ಷ್ಮಣ ಅಣ್ಣ ಮಂಜಯ್ಯನ ಮೇಲೆ ಗುಂಡು ಹಾರಿಸಿದ್ದಾನೆ.

ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಮಂಜಯ್ಯ ಸಾವಿಗೀಡಾಗಿದ್ದು ಘಟನೆ ಕುರಿತಂತೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com