ಚಿಕ್ಕಮಗಳೂರು: ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿದ ತಾಯಿ, ಮೂವರೂ ಸಾವು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಹುಣಸೇಕೊಪ್ಪದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿಕ್ಕಮಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಹುಣಸೇಕೊಪ್ಪದಲ್ಲಿ ನಡೆದಿದೆ.

ಹುಣಸೇಕೊಪ್ಪದ ಲಕ್ಷ್ಮಿ(35), ಸೌಜನ್ಯ(5) ಹಾಗೂ 2 ವರ್ಷದ ಆದ್ಯಾ ಮೃತಪಟ್ಟವರು.

ಕಳೆದ ನಾಲ್ಕು ದಿನಗಳಿಂದ ತಾಯಿ, ಮಕ್ಕಳು ನಾಪತ್ತೆಯಾಗಿದ್ದರು. ನಿನ್ನೆ ಹುಣಸೇಕೊಪ್ಪದ ಕಾಫಿ ತೋಟವೊಂದರ ಕೆರೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ.

ಪದೇ ಪದೇ ಲಕ್ಷ್ಮಿ ತವರು ಮನೆಗೆ ಹೋಗುತ್ತಿದ್ದರಿಂದ ಪತಿ ಆಗಾಗ ಜಗಳವಾಡುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತು ಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಧಾವಿಸಿ ಮೃತ ಲಕ್ಷ್ಮಿಯ ಗಂಡನನ್ನ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಮೃತ ಲಕ್ಷ್ಮಿಯ ಮನೆಯವರು ಗಂಡನ ಕಿರುಕುಳ ಎಂದು ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com