ಮೈಸೂರು: ಕೆ.ಆರ್ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿವೆ, ಆದರೆ ಆಕ್ಸಿಜನ್ ಕೊರತೆ!

ನಗರದ ಕೆಆರ್ ಆಸ್ಪತ್ರೆಗೆ ಇತ್ತೀಚೆಗೆ ಪಿಎಂ ಕೇರ್ಸ್ ನಿಧಿಯಿಂದ 20 ವೆಂಟಿಲೇಟರ್ ಬಂದಿದ್ದು, ಆದರೆ ಆಸ್ಪತ್ರೆಗೆ ಅವುಗಳನ್ನು ಸ್ಥಾಪಿಸಲು ಆಕ್ಸಿಜನ್ ಪೂರೈಕೆಯೊಂದಿಗೆ ಸಾಕಷ್ಟು ಹಾಸಿಗೆಗಳಿಲ್ಲದ ಕಾರಣ ಅವೆಲ್ಲವನ್ನೂ ಬಳಸಲು ಸಾಧ್ಯವಾಗುತ್ತಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ನಗರದ ಕೆಆರ್ ಆಸ್ಪತ್ರೆಗೆ ಇತ್ತೀಚೆಗೆ ಪಿಎಂ ಕೇರ್ಸ್ ನಿಧಿಯಿಂದ 20 ವೆಂಟಿಲೇಟರ್ ಬಂದಿದ್ದು, ಆದರೆ ಆಸ್ಪತ್ರೆಗೆ ಅವುಗಳನ್ನು ಸ್ಥಾಪಿಸಲು ಆಕ್ಸಿಜನ್ ಪೂರೈಕೆಯೊಂದಿಗೆ ಸಾಕಷ್ಟು ಹಾಸಿಗೆಗಳಿಲ್ಲದ ಕಾರಣ ಅವೆಲ್ಲವನ್ನೂ ಬಳಸಲು ಸಾಧ್ಯವಾಗುತ್ತಿಲ್ಲ.

ನಿರ್ಣಾಯಕ ಕೋವಿಡ್ -19 ರೋಗಿಗಳಲ್ಲಿ ಜೀವ ಬೆಂಬಲ ವ್ಯವಸ್ಥೆಗಳ ಅಗತ್ಯವನ್ನು ಪರಿಹರಿಸಲು ಪಿಎಂ ಕೇರ್ಸ್ ಅಡಿಯಲ್ಲಿ ಒದಗಿಸಲಾಗುತ್ತಿದೆ. ಕೋವಿಡ್ ಕ್ರಮಗಳ ಭಾಗವಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಒದಗಿಸಿದ 15 ಸುಧಾರಿತ ವೆಂಟಿಲೇಟರ್‌ಗಳ ಕಥೆಯೂ ಕೂಡ ಇದೇ ಆಗಿದೆ.

ಕೆಆರ್ ಆಸ್ಪತ್ರೆಯಲ್ಲಿ ಕೇವಲ 100 ಹಾಸಿಗೆಗಳು ಆಕ್ಸಿಜನ್ ಪೈಪ್ ಹೊಂದಿದ್ದು, ಅದನ್ನು ವೆಂಟಿಲೇಟರ್‌ಗೆ ಜೋಡಿಸಬೇಕಾಗಿದೆ. ಇವುಗಳನ್ನು ಹೊರತುಪಡಿಸಿ, ಈಗಾಗಲೇ 90 ವೆಂಟಿಲೇಟರ್ ಗಂಬೀರ ಸ್ಥಿತಿಲ್ಲಿರುವ ರೋಗಿಗಳಿಗೆ ಅಳವಡಿಸಲಾಗಿದೆ, ಒಂದು ವೇಳೆ ಅವುಗಳನ್ನು ತೆಗದೆರೇ ರೋಗಿಗಳ ಜೀವಕ್ಕೆ ಅಪಾಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ಕೋವಿಡ್ ಆಸ್ಪತ್ರೆಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಇದುವರೆಗೂ 32 ವೆಂಟಿಲೇಟರ್ ನೀಡಲಾಗಿದ್ದು, ಅವುದ ಅಗತ್ಯವಿದ್ದರೇ   18 ವೆಂಟಿಲೇಟರ್ ಗಳನ್ನು ಇನ್ನೂ ಅಳವಡಿಸಲಾಗಿಲ್ಲ. ಇನ್ನೂ ಹೆಚ್ಚಿನ ಪ್ರಮಾಣದ ಬೆಡ್ ಮತ್ತು ಆಕ್ಸಿಜನ್ ಪೈಪ್ ಆಸ್ಪತ್ರೆಗಳಿಗೆ ಬೇಕಾಗುತ್ತದೆ. ಇನ್ನೂ ಒಂದು ದ್ರವ ಆಮ್ಲಜನಕ ಸ್ಥಾವರವು ಬಹುಕಾಲದಿಂದ ಬಾಕಿ ಉಳಿದಿದೆ ಎಂದು ಮೈಸೂರು ಮೆಡಿಕಲ್ ಕಾಲೇಜು ಸಂಶೋಧನಾ ಸಂಸ್ಥೆಯ ಡಾ.ಸಿ.ಪಿ ನಿರಂಜನ್ ಹೇಳಿದ್ದಾರೆ.

ಆಮ್ಲಜನಕದ ಬೆಂಬಲದೊಂದಿಗೆ ಹಾಸಿಗೆಗಳ ಕೊರತೆಯನ್ನು ಎದುರಿಸುತ್ತಿರುವುದರಿಂದ, ಉಳಿದವುಗಳನ್ನು ನಿರ್ಮಾಣ ಹಂತದಲ್ಲಿರುವ ತುರ್ತು ನಿಗಾ ಘಟಕದಲ್ಲಿ ಸ್ಥಾಪಿಸಲು ಅವರು ಯೋಜಿಸುತ್ತಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com