ಗುಣಮುಖರಾದ ಸಿಎಂ ಯಡಿಯೂರಪ್ಪ: ಕೊರೋನಾ ಸೋಂಕು ಪಾಸಿಟೀವ್ ಇದ್ದದ್ದು ಈಗ ನೆಗೆಟಿವ್!

ಕಳೆದ ವಾರ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಗುಣಮುಖರಾಗಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಕಳೆದ ವಾರ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಗುಣಮುಖರಾಗಿದ್ದಾರೆ. 

ಆ.10 ರಂದು ನಡೆಸಿದ ಕೊರೋನಾ ಸೋಂಕು ಪರೀಕ್ಷೆಯಲ್ಲಿ ಸಿಎಂ ಗೆ ಕೊರೋನಾ ಸೋಂಕು ಗುಣಮುಖವಾಗಿರುವುದು ದಾಖಲಾಗಿದ್ದು, ವರದಿ ನೆಗೆಟಿವ್ ಬಂದಿದೆ. 

ಕೇಂದ್ರ ಗೃಹ ಸಚಿವ ಅಮಿತ್ ಷಾ ಗೆ ಕೊರೋನಾ ಸೋಂಕು ತಗುಲಿದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರಿಗೂ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ನೆನ್ನೆಯಷ್ಟೇ ಅಮಿತ್ ಷಾ ಅವರಿಗೂ ಕೊರೋನಾ ಸೋಂಕು ವರದಿ ನೆಗೆಟಿವ್ ಬಂದಿತ್ತು. 

ಸಿಎಂ ಯಡಿಯೂರಪ್ಪ ದಾಖಲಾಗಿದ್ದ ಮಣಿಪಾಲ್ ಆಸ್ಪತ್ರೆಯಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com