ಡಿ.ಜೆ.ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿಲ್ಲ- ಶಾಸಕ ಜಮೀರ್ ಅಹಮದ್

ಡಿ.ಜೆ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂಬ ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆಂಬ ಆರೋಪವನ್ನು ಸ್ವತಃ ಶಾಸಕ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ.
ಜಮೀರ್ ಮತ್ತು ಸಂಪತ್ ರಾಜ್ (ಫೇಸ್ ಬುಕ್ ಚಿತ್ರ)
ಜಮೀರ್ ಮತ್ತು ಸಂಪತ್ ರಾಜ್ (ಫೇಸ್ ಬುಕ್ ಚಿತ್ರ)
Updated on

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂಬ ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆಂಬ ಆರೋಪವನ್ನು ಸ್ವತಃ ಶಾಸಕ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಮೀರ್ ಅಹಮದ್ ಖಾನ್ ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರ ವಾದುದು. ಕಪೋಲ ಕಲ್ಪಿತ ವರದಿಗಳನ್ನು ಪ್ರಸಾರ ಮಾಡುವ ಮೂಲಕ ಮಾಧ್ಯಮಗಳು ತಮ್ಮ ಘನತೆಗೆ ಕುಂದುಂಟು ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

'ನಿನ್ನೆಯ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ‌ ಪಕ್ಷದ ಮುಖಂಡರಾದ ಸಂಪತ್ ಅವರ ಕೈವಾಡವಿದೆ ಎಂದು ನಾನು ಕೆಲವರ ಬಳಿ ಹೇಳಿದ್ದೇನೆ ಎಂಬ ಸುಳ್ಳು ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮಾಧ್ಯಮಗಳಿಗೆ ನನ್ನದೊಂದು ಮನವಿ, ದಯವಿಟ್ಟು ಕಲ್ಪಿತ ವರದಿಗಳನ್ನು ಪ್ರಸಾರ ಮಾಡಿ ಜನರಿಗೆ ತಪ್ಪು ಸಂದೇಶ ನೀಡಬೇಡಿ'.

'ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ' ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com