74ನೇ ಸ್ವಾತಂತ್ರ್ಯ ದಿನಾಚರಣೆ: ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವದು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 
ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ)
Updated on

ಬೆಂಗಳೂರು: ದೇಶದಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆಮಾಡಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವದು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಿಸುತ್ತಾ, ದೇಶಕಟ್ಟುವ ಕಾಯಕದಲ್ಲಿ ಜೊತೆಯಾಗೋಣ ಎಂದು ಹೇಳಿದ್ದಾರೆ. 

ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. 

ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರು ಭಾಗವಿಸುತ್ತಿರುವುದು ಇದೇ ಮೊದಲ ಕಾರ್ಯಕ್ರಮವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com