ಬೆಂಗಳೂರು ಗಲಭೆ: ಘಟನಾ ಸ್ಥಳಕ್ಕೆ ಬಿಜೆಪಿ ಸಮಿತಿ ಭೇಟಿ, ಪರಿಶೀಲನೆ

ನಗರದ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಶೀಲನಾ ಸಮಿತಿಯು ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿತು. 
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬಿಜೆಪಿ ಸಮಿತಿ ಸದಸ್ಯರು
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬಿಜೆಪಿ ಸಮಿತಿ ಸದಸ್ಯರು
Updated on

ಬೆಂಗಳೂರು: ನಗರದ ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಶೀಲನಾ ಸಮಿತಿಯು ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿತು. 

ಗಲಭೆ ಪ್ರಕರಣ ಸಂಬಂಧ ಸತ್ಯಸತ್ಯತೆಗಳನ್ನು ಬಯಲಿಗೆಳೆಯರು ಬಿಜೆಪಿಯು 6 ಸದಸ್ಯರ ಸಮಿತಿಯೊಂದರನ್ನು ರಚನೆ ಮಾಡಿತ್ತು. ಸಮತಿಯಲ್ಲಿ ಚಲವಾದಿ ನಾರಾಯಣ ಸ್ವಾಮಿ, ಅರವಿಂದ ಲಿಂಬಾವಳಿ, ಎಂ.ಶಂಕರಪ್ಪ, ಮಲ್ಲಿಕಯ್ಯ ಗುತ್ತೇದಾರ್, ಪಿಸಿ ಮೋಹನ್ ಹಾಗೂ ನಾರಾಯಣ ಸ್ವಾಮಿ ಇದ್ದು, ನಿನ್ನೆಯಷ್ಟೇ ಈ ಸಮಿತಿಯ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭೇಟಿ ವೇಳೆ ಗಲಭೆಯಲ್ಲಿ ನಲುಗಿ ಹೋಗಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಗೂ ಭೇಟಿ ಪರಿಶೀಲಿಸಿದರು. 

ಭೇಟಿ ಬಳಿಕ ಸಮಿತಿಯ ಸದಸ್ಯರು ವರದಿಯನ್ನು ಸಿದ್ಧಪಡಿಸಲಿದ್ದು, ಈ ವರದಿಯನ್ನು ಇನ್ನೊಂದು ವಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಲಿದ್ದಾರೆ. 

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಲಿಂಬಾವಳಿಯವರು, ನಾನು ಅನೇಕ ಬಾರಿ ಕಾಶ್ಮೀರಕ್ಕೆ ಹೋಗಿದ್ದೇನೆ. ಅಲ್ಲಿಯೂ ಇಂತ ಪರಿಸ್ಥಿತಿ ನೋಡಿರಲಿಲ್ಲ. ಹೀಗೇ ಬಿಟ್ಟರೆ ಕರ್ನಾಟಕ ರಾಜ್ಯವು ಇಂಥ ಚಟುವಟಿಕೆ ನಡೆಸುವವರ ತಾಣವಾಗಲಿದೆ. ಹಾಗಾಗಿ ಕೃತ್ಯಕ್ಕೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು. 

ಇದು ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯವೋ, ಶಾಸಕ ಶ್ರೀನಿವಾರ ಮೂರ್ತಿಯವರ ರಾಜಕೀಯ ಬೆಳವಣಿಗೆ ಸಹಸಲಾರದೆ ನಡೆದ ಘಟನೆಯೋ, ದಲಿತ ಮೇಲೆ ನಡೆದ ದಾಳಿಯೋ ನನಗೆ ಗೊತ್ತಿಲ್ಲ. ಆದರೆ, ಇದೊಂದು ವ್ಯವಸ್ಥಿತ ಪಿತೂರಿಯಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com