ವಿಜಯಪುರ: ಎಟಿಎಂ ಸೆಕ್ಯೂರಿಟಿ ಗಾರ್ಡ್ ಭೀಕರ ಕೊಲೆ

ಭದ್ರತಾ ಸಿಬ್ಬಂದಿಯನ್ನು ಭೀಕರವಾಗಿ ಕೊಲೆ ಮಾಡಿ ಎಟಿಎಂ ದರೋಡೆ ಮಾಡಿರುವ ಘಟನೆ ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
ಎಟಿಎಂ ದರೋಡೆ ಮಾಡಿರುವ ಸ್ಥಳ
ಎಟಿಎಂ ದರೋಡೆ ಮಾಡಿರುವ ಸ್ಥಳ
Updated on

ವಿಜಯಪುರ: ಭದ್ರತಾ ಸಿಬ್ಬಂದಿಯನ್ನು ಭೀಕರವಾಗಿ ಕೊಲೆ ಮಾಡಿ ಎಟಿಎಂ ದರೋಡೆ ಮಾಡಿರುವ ಘಟನೆ ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

22 ವರ್ಷದ ರಾಹುಲ್ ರಾಠೋಡ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಐಸಿಐಸಿಐ‌ ಬ್ಯಾಂಕ್​ಗೆ ಸೇರಿರುವ ಎಟಿಎಂ ಅನ್ನು ದರೋಡೆ ಮಾಡಿ ಕೊಲೆಗಡುಕರು ಪರಾರಿಯಾಗಿದ್ದಾರೆ.

ಮಂಕಿ‌ ಕ್ಯಾಪ್ ಹಾಕಿಕೊಂಡು ಬಂದಿದ್ದ ಮೂವರ ತಂಡ ಮೊದಲಿಗೆ ಸೆಕ್ಯೂರಿಟಿ ಗಾರ್ಡ್ ತಲೆಗೆ ಸುತ್ತಿಗೆಯಿಂದ ಹೊಡೆದು  ಕೊಲೆ ಮಾಡಿದ್ದರು. ನಂತರ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com