ವಿಜಯಪುರ: ಭದ್ರತಾ ಸಿಬ್ಬಂದಿಯನ್ನು ಭೀಕರವಾಗಿ ಕೊಲೆ ಮಾಡಿ ಎಟಿಎಂ ದರೋಡೆ ಮಾಡಿರುವ ಘಟನೆ ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್ನಲ್ಲಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
22 ವರ್ಷದ ರಾಹುಲ್ ರಾಠೋಡ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಐಸಿಐಸಿಐ ಬ್ಯಾಂಕ್ಗೆ ಸೇರಿರುವ ಎಟಿಎಂ ಅನ್ನು ದರೋಡೆ ಮಾಡಿ ಕೊಲೆಗಡುಕರು ಪರಾರಿಯಾಗಿದ್ದಾರೆ.
ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಮೂವರ ತಂಡ ಮೊದಲಿಗೆ ಸೆಕ್ಯೂರಿಟಿ ಗಾರ್ಡ್ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದರು. ನಂತರ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
Advertisement