ವಿಜಯಪುರ: ಎಟಿಎಂ ಸೆಕ್ಯೂರಿಟಿ ಗಾರ್ಡ್ ಭೀಕರ ಕೊಲೆ

ಭದ್ರತಾ ಸಿಬ್ಬಂದಿಯನ್ನು ಭೀಕರವಾಗಿ ಕೊಲೆ ಮಾಡಿ ಎಟಿಎಂ ದರೋಡೆ ಮಾಡಿರುವ ಘಟನೆ ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.
ಎಟಿಎಂ ದರೋಡೆ ಮಾಡಿರುವ ಸ್ಥಳ
ಎಟಿಎಂ ದರೋಡೆ ಮಾಡಿರುವ ಸ್ಥಳ

ವಿಜಯಪುರ: ಭದ್ರತಾ ಸಿಬ್ಬಂದಿಯನ್ನು ಭೀಕರವಾಗಿ ಕೊಲೆ ಮಾಡಿ ಎಟಿಎಂ ದರೋಡೆ ಮಾಡಿರುವ ಘಟನೆ ಸಿಂದಗಿ ಪಟ್ಟಣದ ಶಾಪೂರ ಕಾಂಪ್ಲೆಕ್ಸ್‌ನಲ್ಲಿ ನಡೆದಿದ್ದು, ಜನ ಬೆಚ್ಚಿಬಿದ್ದಿದ್ದಾರೆ.

22 ವರ್ಷದ ರಾಹುಲ್ ರಾಠೋಡ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಐಸಿಐಸಿಐ‌ ಬ್ಯಾಂಕ್​ಗೆ ಸೇರಿರುವ ಎಟಿಎಂ ಅನ್ನು ದರೋಡೆ ಮಾಡಿ ಕೊಲೆಗಡುಕರು ಪರಾರಿಯಾಗಿದ್ದಾರೆ.

ಮಂಕಿ‌ ಕ್ಯಾಪ್ ಹಾಕಿಕೊಂಡು ಬಂದಿದ್ದ ಮೂವರ ತಂಡ ಮೊದಲಿಗೆ ಸೆಕ್ಯೂರಿಟಿ ಗಾರ್ಡ್ ತಲೆಗೆ ಸುತ್ತಿಗೆಯಿಂದ ಹೊಡೆದು  ಕೊಲೆ ಮಾಡಿದ್ದರು. ನಂತರ ಎಟಿಎಂನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com