ಉಡುಪಿ: ಮಲ್ಪೆ ಸಮುದ್ರದಲ್ಲಿ ದೋಣಿ ದುರಂತ, 7 ಮಂದಿ ರಕ್ಷಣೆ

ಮಲ್ಪೆ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಯಾಂತ್ರಿಕೃತ ಮೀನುಗಾರಿಕಾ ದೋಣಿ ಬುಧವಾರ ಎರಡು ನಾಟಿಕಲ್‍ ಮೈಲಿ ದೂರದಲ್ಲಿ ಮಗುಚಿದೆ.
ಉಡುಪಿ: ಮಲ್ಪೆ ಸಮುದ್ರದಲ್ಲಿ ದೋಣಿ ದುರಂತ, 7 ಮಂದಿ ರಕ್ಷಣೆ
Updated on

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಯಾಂತ್ರಿಕೃತ ಮೀನುಗಾರಿಕಾ ದೋಣಿ ಬುಧವಾರ ಎರಡು ನಾಟಿಕಲ್‍ ಮೈಲಿ ದೂರದಲ್ಲಿ ಮಗುಚಿದೆ.

ದೋಣಿಯಲ್ಲಿದ್ದ ಎಲ್ಲಾ ಏಳು ಮೀನುಗಾರರನ್ನು ಇತರ ಮೀನುಗಾರಿಕಾ ದೋಣಿಗಳಲ್ಲಿದ್ದ ಮೀನುಗಾರರು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ ಎಂದು ಮಲ್ಪೆ ಬಂದರು ಮೂಲಗಳು ತಿಳಿಸಿವೆ.

ಗಿರೀಶ್ ಸುವರ್ಣ ಎಂಬುವರ ಮಾಲೀಕತ್ವದ ‘ಬಾಹುಬಲಿ’ ಎಂಬ ಹೆಸರಿನ ದೋಣಿ ದುರಂತಕ್ಕೀಡಾಗಿದೆ. ದೋಣಿ ಮಾಲೀಕರಿಗೆ 80 ಲಕ್ಷ ರೂ ನಷ್ಟವಾಗಿದೆಯೆಂದು ಅಂದಾಜಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com