ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

ಜೂಜಾಡುವ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣಗಳ ಕಳವು ಮಾಡಿ ಇದೀಗ ಗಿರಿನಗರದ ಪೊಲೀಸರ ಅತಿಥಿಯಾಗಿದ್ದಾನೆ.
ಬಂಧಿತ ಆರೋಪಿ ಶಂಕರಪ್ಪ
ಬಂಧಿತ ಆರೋಪಿ ಶಂಕರಪ್ಪ
Updated on

ಬೆಂಗಳೂರು: ಜೂಜಾಡುವ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣಗಳ ಕಳವು ಮಾಡಿ ಇದೀಗ ಗಿರಿನಗರದ ಪೊಲೀಸರ ಅತಿಥಿಯಾಗಿದ್ದಾನೆ.

ಶಂಕರಪ್ಪ ಬಂಧಿತ ಆರೋಪಿ. ಆರೋಪಿಯು ಕೆಲ ವರ್ಷಗಳಿಂದ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಎಗರಿಸಿದ್ದ.

ನಂತರ ಶಂಕರಪ್ಪ ಕಳವು ಮಾಡಿದ ಚಿನ್ನಾಭರಣವನ್ನು ಹೊಸದುರ್ಗದಲ್ಲಿ ಅಡವಿಟ್ಟಿದ್ದ. ಮನೆಯಲ್ಲಿದ್ದ ಚಿನ್ನಾಭರಣ ಕಾಣೆಯಾದಾಗ ಮನೆಯ ಯಜಮಾನ, ಗಿರಿನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು

ಆದರೆ ಆರೋಪಿ ಶಂಕರಪ್ಪ ತಾನು ಅಡವಿಟ್ಟ ಚಿನ್ನದಿಂದ ಬಂದ ಹಣವನ್ನು ಜೂಜಿನಲ್ಲಿ ಕಳೆದಿದ್ದ. ಇದೀಗ ಆರೋಪಿಯನ್ನು ಬಂಧಿಸಿರುವ ಪೋಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com