ತುಮಕೂರು: ಆಟವಾಡುವಾಗ ನೀರಿನ ಸಂಪಿಗೆ ಬಿದ್ದು ಬಾಲಕ ಸಾವು 

ಮನೆಯಂಗಳದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಿಪಟೂರು ತಾಲೂಕಿನ ಅಯ್ಯನಬಾವಿ ಎಂಬಲ್ಲಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ಮನೆಯಂಗಳದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ನೀರಿನ ಸಂಪಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಿಪಟೂರು ತಾಲೂಕಿನ ಅಯ್ಯನಬಾವಿ ಎಂಬಲ್ಲಿ ನಡೆದಿದೆ. 

ಕಸಬಾ ಹೋಬಳಿ ಅಯ್ಯನಬಾವಿ ಗ್ರಾಮದ ನಾಗಮಣಿ ಮತ್ತು ಸ್ವಾಮಿ ದಂಪತಿಯ ಪುತ್ರ ಪ್ರಸಾದ್ ಗೌಡ (4) ಮೃತಪಟ್ಟ ಬಾಲಕ. ಇಂದು ಬೆಳಗ್ಗೆ ತಾಯಿ ನಾಗಮಣಿ ಅವರು ಅಡುಗೆ ಕೆಲಸ ಮಾಡುತ್ತಿದ್ದಾಗ ಮಗ ಹೊರಗಡೆ ಆಟವಾಡುತ್ತಿದ್ದ. ಈ ವೇಳೆ ಬಾಲಕ ಸಂಪಿಗೆ ಬಿದ್ದಿದ್ದಾನೆ. ಇದನ್ನು ಯಾರೂ ಗಮನಿಸಿರಲಿಲ್ಲ.

ಸ್ವಲ್ಪ ಹೊತ್ತಿನ ಬಳಿಕ ಮಗನ ಶಬ್ಧ ಕೇಳದಾದಾಗ ತಾಯಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ಕೊನೆಗೆ ಸಂಪಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com