ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರಗೆ ಕೊರೋನಾ ದೃಢ 

 ರಾಜ್ಯದಲ್ಲಿ ದಿನ ದಿನಕ್ಕೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು ಶಾಸಕರು, ಸಂಸದರು ಸೇರಿ ಯಾರೂ ಈ ಸೋಂಕಿನಿಂದ ಹೊರಗುಳಿದಿಲ್ಲ. ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ  ಅವರಿಗೂ ಸೋಂಕು ದೃಢಪಟ್ಟಿದೆ. 
ಅರಗ ಜ್ಞಾನೇಂದ್ರ
ಅರಗ ಜ್ಞಾನೇಂದ್ರ
Updated on

ತೀರ್ಥಹಳ್ಳಿ: ರಾಜ್ಯದಲ್ಲಿ ದಿನ ದಿನಕ್ಕೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು ಶಾಸಕರು, ಸಂಸದರು ಸೇರಿ ಯಾರೂ ಈ ಸೋಂಕಿನಿಂದ ಹೊರಗುಳಿದಿಲ್ಲ. ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ  ಅವರಿಗೂ ಸೋಂಕು ದೃಢಪಟ್ಟಿದೆ. 

ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿರುವ ಶಾಸಕ ಅರಗ ಜ್ಞಾನೇಂದ್ರ "ನನಗೆ ಯಾವ ರೋಗ ಲಕ್ಷಣವಿಲ್ಲದಿದ್ದರೂ ಕೋವಿಡ್ ದೃಢಪಟ್ಟಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಶೀಘ್ರ ಗುಣಮುಖನಾಗಿ ನಿಮ್ಮ ಸೇವೆಗೆ ಮರಳುತ್ತೇನೆ" ಎಂದಿದ್ದಾರೆ.

"ಆತ್ಮೀಯರೇ, ನಾನು ಇಂದು #COVID19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲವಾದರೂ, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಗೊಳಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ.

"ನಿಮ್ಮ ಶುಭಾಶೀರ್ವಾದಗಳೊಂದಿಗೆ ಶೀಘ್ರದಲ್ಲೇ ನಿಮ್ಮ ಸೇವೆಗೆ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಂತಹ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತಿದ್ದೇನೆ.." ಶಾಸಕರು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com