ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕಿರ್ ಬಂಧನ

ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಡಿ ಜೆ ಹಳ್ಳಿ ಗಲಭೆ ಪ್ರಕರಣ
ಡಿ ಜೆ ಹಳ್ಳಿ ಗಲಭೆ ಪ್ರಕರಣ
Updated on

ಬೆಂಗಳೂರು: ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು. ಈಗ ಕಾಂಗ್ರೆಸ್ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸುವ ಮೂಲಕ ಮಹತ್ವದ ಬೆಳವಣಿಗೆಯಾಗಿದೆ. ಸಂಪತ್ ರಾಜ್ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ರಾಕಿಬ್ ಜಾಕೀರ್ ಪುಲಕೇಶಿನಗರ ವಾರ್ಡ್ ನ ಮಾಜಿ ಕಾರ್ಪೊರೇಟರ್. ಈತ ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಹೇಳಲಾಗುತ್ತಿದೆ. ಸಿಸಿಬಿ ಪೊಲೀಸರು ಈತನಿಗೆ ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದರು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ. 

ಜಾಕೀರ್ ಇರುವಿಕೆಯ ಸುಳಿವು ಪಡೆದ ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com