ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಓರ್ವ ಆರೋಪಿ ಬಂಧನ

ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 
ಉಗ್ರರ ಪರ ಗೋಡೆ ಬರಹ ಬರೆದಿರುವುದು
ಉಗ್ರರ ಪರ ಗೋಡೆ ಬರಹ ಬರೆದಿರುವುದು
Updated on

ಮಂಗಳೂರು: ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ. 

ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮೊಹಮ್ಮದ್ (26) ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆಗೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಬಂಧಿತ ಆರೋಪಿ ಆನ್'ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ ಎಂದು ಹೇಳಲಾಗುತ್ತಿದ್ದು, ಮೊಬೈಲ್ ದಾಖಲೆ ಆಧರಿಸಿ ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. 

ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ "ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ.'' ಅಲ್ಲದೆ 'ಲಷ್ಕರ್ ಝಿಂದಾಬಾದ್' ಎಂದು ಬರೆಯಲಾಗಿತ್ತು. ಬಳಿಕ ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ "Gustak e rasool ek hi saza tan say juda" ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆಯು ದೇಹದಿಂದ ಬೇರ್ಪಡುವುದು ಎಂಬ ಅರ್ಥ ನೀಡುವ ಬರವಣಿಗೆ ಇದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com