ಬೆಂಗಳೂರು: 9 ಲಕ್ಷ ರೈತರು ರಾಷ್ಟ್ರಪತಿಗೆ ಪೋಸ್ಟ್ ಕಾರ್ಡ್ ಮೂಲಕ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲಿದ್ದಾರೆಂದು ತಿಳಿದುಬಂದಿದೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ರೈತ ವಿರೋಧಿ ಕರಾಳ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಸಹಿ ಸಂಗ್ರಹ' ಅಭಿಯಾನದಲ್ಲಿ, ರಾಜ್ಯದ ವಿವಿಧ ಮೂಲೆಗಳ ರೈತರಿಂದ ಸಂಗ್ರಹಿಸಲಾದ ಸಹಿ ಪತ್ರಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷರಾದ ಸಚಿನ ಮಿಗಾ ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಕೆಪಿಸಿಸಿ ಐಟಿ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಇದ್ದರು.
ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ಪೋಸ್ಟ್ ಕಾರ್ಡ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರಪತಿಗೆ ತಲುಪಿಸಲಿದ್ದಾರೆ. ಎಪಿಎಂಸಿ, ಕಾರ್ಮಿಕ ಕಾಯ್ದೆ ಹಾಗೂ ಭೂ.ಸುಧಾರಣೆ ಕಾಯ್ದೆ ರದ್ದು ಪಡಿಸುವಂತೆ ಸಹಿ ಸಂಗ್ರಹ ಮಾಡಲಾಗಿದೆ ಎಂದರು.
Advertisement