ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತೀರ್ಪು ಡಿ.14ಕ್ಕೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾಲಯ ಡಿಸೆಂಬರ್ 14ಕ್ಕೆ ಕಾಯ್ದಿರಿಸಿದೆ.
ವಿನಯ್ ಕುಲಕರ್ಣಿ
ವಿನಯ್ ಕುಲಕರ್ಣಿ
Updated on

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾಲಯ ಡಿಸೆಂಬರ್ 14ಕ್ಕೆ ಕಾಯ್ದಿರಿಸಿದೆ.

ನಗರದ ವಿಶೇಷ ಸಿಬಿಐ ಕೋರ್ಟ್ ಇಂದು ಎರಡೂ ಪಕ್ಷದವರ ವಾದ ವಿವಾದಗಳನ್ನು ಆಲಿಸಿದ ನಂತರ ತೀರ್ಪನ್ನು ಡಿಸೆಂಬರ್ 14ಕ್ಕೆ ಕಾಯ್ದಿರಿಸಿ ಆದೇಶಿಸಿದೆ.

ಸಧ್ಯ ಆರೋಪಿ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆದರೆ ಇತ್ತೀಚೆಗೆ ಅವರು ರೌಡಿ ಶೀಟರ್ ಜತೆ ಸಂಪರ್ಕಕ್ಕೆ ಬಂದಿದ್ದಾರೆ, ಜೈಲಿನಲ್ಲೂ ವಿಲಾಸಿ ಜೀವನ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. 

2016 ಜೂನ್ ನಲ್ಲಿ ಯೋಗೀಶ್ ಗೌಡ ಹತ್ಯೆ ನಡೆದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com