ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿಜಯಪುರ: ಕಲ್ಯಾಣ ಮಂಟಪದಿಂದ ಆಗಮಿಸಿ ಪಂಚಾಯತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಧುಮಗ

ಮಧುಮಗನೋರ್ವ ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆಯೊಂದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.
Published on

ವಿಜಯಪುರ: ಮಧುಮಗನೋರ್ವ ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆಯೊಂದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.

ಗ್ರಾ.ಪಂಚಾಯತ್ ಚುನಾವಣೆಗೆ ಗ್ರಾಮದ ನಿವಾಸಿ ಮಕ್ಬುಲ್ ಬನ್ನೆಟ್ಟಿ ಎಂಬುವರು ನಾಮಪತ್ರ ಸಲ್ಲಿಸಿದ್ದಾರೆ. 

ಇಂದು ಮಕ್ಬುಲ್ ಬನ್ನೆಟ್ಟಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಮಧ್ಯಾಹ್ನ 2.55ಕ್ಕೆ ಬಿದರಕುಂದಿ ಗ್ರಾಪಂ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. 

ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೃತ್ತಿಯಲ್ಲಿ ನಾನೋರ್ವ ಪತ್ರಕರ್ತನಾಗಿದ್ದು, ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಅರಿತಿದ್ದೇನೆ. ಹೀಗಾಗಿ ಸಮಸ್ಯೆಗಳ ಸುಧಾರಣೆಗಾಗಿ ಪ್ರಾಮಾಣಿಕವಾಗಿ ದುಡಿಯಲು ಪಂಚಾಯತ್‌ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com