ಖ್ಯಾತ ವಿಜ್ಞಾನಿ ರೊದ್ದಂ ನರಸಿಂಹ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

 ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆಬ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ
ಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ
Updated on

ಬೆಂಗಳೂರು: ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದುದು. ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತ ಭಾಷಾ ಪ್ರವೀಣರಾಗಿದ್ದ ಅವರು ವಿಜ್ಞಾನ ಮತ್ತು ತತ್ವಜ್ಞಾನದ ನಡುವಿನ ಸಂಬಂಧದ ಕುರಿತಂತೆ ರಚಿಸಿದ ಕೃತಿಗಳೂ ಅಷ್ಟೇ ಮಹತ್ವ ಹೊಂದಿದ್ದವು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದ್ದಾರೆ.

ಅವರ ನಿಧನದಿಂದ ದೇಶ ಶ್ರೇಷ್ಠ ವಿಜ್ಞಾನಿಯೊಬ್ಬರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರು, ಅಭಿಮಾನಿ ಬಳಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com