ಗೋಕಾಕ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಗೋಕಾಕದ ಶೂನ್ಯ ಸಂಪಾದನಾ ಮಠ ನೀಡಲಿರುವ ‘ಕಾಯಕ ಶ್ರೀ’ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.
ಲೈಂಗೈಕ್ಯ. ಬಸವ ಸ್ವಾಮೀಜಿ ಪುಣ್ಯಸ್ಮರಣೋತ್ಸವ ಅಂಗವಾಗಿ 16ನೇ ಶರಣ ಸಂಸ್ಕೃತಿ ಉತ್ಸವ ಫೆ.1ರಿಂದ 4 ರವರೆಗೆ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ನೆರವೇರಲಿದ್ದು ಈ ವೇಳೆ ಉತ್ಸವದ ಮೊದಲ ದಿನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಶಸ್ತಿಯು 1 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದೆ.
ಕಳೆದ ವರ್ಷ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಹಾಗೂ ಭಾರತದ ಕ್ಷಿಪಣಿ ಮಹಿಳೆ ಡಾ. ತೆಸ್ಸಿ ಥಾಮಸ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Advertisement