ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ: ತನಿಖೆಗೆ ಮುಂದಾಗ ಪೊಲೀಸರು

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದ್ದು, ಈ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ರವಿ ಪೂಜಾರಿ
ರವಿ ಪೂಜಾರಿ
Updated on

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದ್ದು, ಈ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಕೆಲ ದಿನಗಳ ಹಿಂದಷ್ಟೇ ಪೊಲೀಸರು ಕವಿರಾಜ್ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದು. ಈತ ಭೂಗತ ಪಾತಕಿ ರವಿ ಪೂಜಾರಿ ಆಪ್ತನಾಗಿದ್ದಾನೆಂದು ಹೇಳಲಾಗುತ್ತಿದೆ. ಆರೋಪಿಯನ್ನು 5 ದಿನಗಳ ಕಾಲ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ವಿಚಾರಣೆ ವೇಳೆ ಕವಿರಾಜ್ ಕೆಲ ಮಾಹಿತಿಗಳನ್ನು ಬಾಯ್ಬಿಟ್ಟಿದ್ದು, ವರ್ತೂರು ಪ್ರಕಾಶ್ ಅಪಹರಣ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರ ಇರುವ ಶಂಕೆಗಳು ವ್ಯಕ್ತವಾಗಿದೆ. ಹೀಗಾಗಿ ಪೊಲೀಸರು ಈ ಆಯಾಮದಲ್ಲೂ ತನಿಖೆ ಆರಂಭಿಸಿದ್ದಾರೆ. 

ಪ್ರಕರಣ ಸಂಬಂಧ ಈ ವರೆಗೂ 12ಕ್ಕೂ ಹೆಚ್ಚು ಆರೋಪಿಗಳನ್ನು ಗುರ್ತಿಸಿರುವ ಪೊಲೀಸರು, ಎಲ್ಲರೂ ಕರ್ನಾಟರ ಮೂಲದವರೇ ಆಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com