ಬೆಂಗಳೂರು: ಆರ್ಎಸ್ಎಸ್ ನಾಯಕ ಹಾಗೂ ಅಮಿತ್ ಶಾ, ಜೆಪಿ ನಡ್ಡಾ ಸೇರಿ ಇತರೆ ಬಿಜೆಪಿ ನಾಯಕರ ಹೆಸರು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಯುವರಾಜನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ತೆಗೆದುಕೊಂಡಿದೆ.
ಮೂಲತಃ ಶಿವಮೊಗ್ಗದವನಾದ ಯುವರಾಜಹಲವಾರು ವರ್ಷಗಳಿಂದ ಬೆಂಗಳುರುನಲ್ಲಿ ನೆಲೆಸಿದ್ದ.ಈತನ ವಿರುದ್ಧ ಕೋಟ್ಯಾಂತರ ರೂ. ವಂಚನೆ ಪ್ರಕರಣವಿದ್ದು ಉದ್ಯಮಿ ಸುಧೀಂದ್ರ ರೆಡ್ಡಿ ಎಂಬುವವರು ಈತನ ವಿರುದ್ಧ ಸಿಸಿಬಿಗೆ ದೂರು ಸಲ್ಲಿಸಿದ್ದರು.
ದೂರು ಹಿನ್ನೆಲೆ ನಿನ್ನೆ ಯುವರಾಜನ ನಾಗರಭಾವಿ ನಿವಾಸದ ಮೇಲೆ ದಾಳಿ ಮಾಡಿ ಬಂಧಿಸಿದ್ದರು.ಇಂದು ಆತನನ್ನು ವಸಂತ ನಗರದಲ್ಲಿರುವ ವರ್ಚುಯಲ್ ಕೋರ್ಟ್ಗೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆತನನ್ನು ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.
Advertisement