ಕರ್ನಾಟಕ ಸರ್ಕಾರ ಮತ್ತು ಯುಕೆ ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತ ಒಡಂಬಡಿಕೆಗೆ ಸಹಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ರಾಜ್ಯ ಸರ್ಕಾರ ಮತ್ತು ಬ್ರಿಟಿಷ್ ಸರ್ಕಾರದ ನಡುವೆ ಇಂದು ಸಹಿ ಮಾಡಲಾಯಿತು.
ಕರ್ನಾಟಕ ಸರ್ಕಾರ ಮತ್ತು ಯುಕೆ  ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ  ದ್ವಿಪಕ್ಷೀಯ ಸಹಕಾರ ಕುರಿತ ಒಡಂಬಡಿಕೆಗೆ ಸಹಿ
ಕರ್ನಾಟಕ ಸರ್ಕಾರ ಮತ್ತು ಯುಕೆ  ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ  ದ್ವಿಪಕ್ಷೀಯ ಸಹಕಾರ ಕುರಿತ ಒಡಂಬಡಿಕೆಗೆ ಸಹಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ರಾಜ್ಯ ಸರ್ಕಾರ ಮತ್ತು ಬ್ರಿಟಿಷ್ ಸರ್ಕಾರದ ನಡುವೆ ಇಂದು ಸಹಿ ಮಾಡಲಾಯಿತು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾಯಕತ್ವ ಬೆಳವಣಿಗೆಗೆ ಸಂಬಂಧಿಸಿದಂತೆ ಮೊಟ್ಟಮೊದಲ ಬಾರಿಗೆ ಮೂರು ವರ್ಷಗಳ ಅವಧಿಯ ಒಪ್ಪಂದಕ್ಕೆ ಎರಡೂ ಸರ್ಕಾರಗಳು ಸಹಿ ಮಾಡಿವೆ ಎಂದರು. 

ಸಹಕಾರ , ವಾಣಿಜ್ಯ ಮತ್ತು ವ್ಯಾಪಾರ , ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣಾ ಮತ್ತು ಸಂಸ್ಕøತಿ ಮುಂತಾದ ಹಲವು ಕ್ಷೇತ್ರಗಳಿಗೆ ಭಾರತ ಮತ್ತು ಬ್ರಿಟಿಷ್ ನಡುವಿನ ಸಂಬಂಧ ವ್ಯಾಪಿಸಿದೆ. ಕರ್ನಾಟಕ ಸರ್ಕಾರದ ಗ್ಲೋಬಲ್ ಇನ್ನೋವೇಷನ್ ಅಲಯನ್ಸ್ ಕಾರ್ಯಕ್ರಮವು  ವಿಶ್ವದಾದ್ಯಂತ ಎಲ್ಲಾ ರಾಷ್ಟ್ರಗಳೊಂದಿಗೆ ನಾವೀನ್ಯತಾ ಪಾಲುದಾರಿಕೆಯನ್ನು  ಹೆಚ್ಚಿಸುವ ಮೂಲಕ ಕರ್ನಾಟಕವನ್ನು ಮುಂಚೂಣಿಯಲ್ಲಿರುವ ತಂತ್ರಜ್ಞಾನ ಹಬ್ ಎಂಬ ಜಾಗತಿಕ ಕೀರ್ತಿಗೆ ಪಾತ್ರವಾಗಿಸಿದೆ. ಯು.ಕೆ ಕರ್ನಾಟಕದ ಬಹುಮುಖ್ಯ ಜಿ.ಐ.ಎ ಪಾಲುದಾರನಾಗಿದ್ದು, 2017-18 ರಲ್ಲಿ ಶೇ 38% ರಷ್ಟು ಹೂಡಿಕೆಯನ್ನು ಭಾರತದಲ್ಲಿ ಬ್ರಿಟಿಷ್ ಸರ್ಕಾರ ಮಾಡಿದೆ.

ಟೆಕ್ ಹಬ್, ಟೆಕ್ ಕ್ಲಸ್ಟರ್ಸ್ ಸ್ಥಾಪನೆ ಹಾಗೂ ಗೋ ಗ್ಲೋಬಲ್ ನಂತಹ ಕಾರ್ಯಕ್ರಮಗಳು ಭಾರತದಿಂದ ನಾವೀನ್ಯತಾ ಸ್ಟಾರ್ಟ್‍ಅಪ್‍ಗಳನ್ನು ಯು.ಕೆಗೆ ತಲುಪಿಸಲು ಸಾಧ್ಯವಾಗಿಸಿರುವುದು ಸ್ವಾಗತಾರ್ಹ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯು ಬ್ರಿಟಿಷ್ ಸರ್ಕಾರದೊಂದಿಗೆ ಹವಾಮಾನ ಸ್ಥಿತಿಸ್ಥಾಪಕ ನಗರಗಳ ಸಮೃದ್ಧ ನಗರಾಭಿವೃದ್ಧಿ ಕಾರ್ಯಕ್ರಮದ ಮೂಲಕ ಈಗಾಗಲೇ ಸಹಯೋಗವನ್ನು ಬೆಳೆಸಿದೆ.ಈ ಮೂಲಕ ಬೆಂಗಳೂರಿನಲ್ಲಿ  ಬಹುವಿಧ ಸಾರಿಗೆ ಹಬ್‍ಗಳ ವಿನ್ಯಾಸ ಮತ್ತು ಕಾರ್ಯಾಚರಣೆಗೆ ಪರಿವರ್ತಿತ ಯೋಜನೆಯನ್ನು ತರುವಲ್ಲಿ ಸಹಕಾರಿಯಾಗಿದೆ. ಸಮಗ್ರ ಸಾರಿಗೆ ಪ್ರಾಧಿಕಾರ ಮತ್ತು ಸಾರಿಗೆ ಪರಿವೀಕ್ಷಣಾಲಯವನ್ನು  ಯುಕೆ ಕಾಟಪಲ್ಟ್ ನ ಸಹಯೋಗದೊಂದಿಗೆ ಜಾರಿಗೆ ತರಲಾಗುತ್ತಿದೆ ಎಂದರು. ಈ ಯೋಜನೆಯು ವಾಯು ಮಾಲಿನ್ಯ ತಡೆಗೆ ನವೀನ ಮಾದರಿಗಳನ್ನು ಕಲ್ಪಿಸುತ್ತದೆ. ಈ ಕ್ಷೇತ್ರದಲ್ಲಿ ಕರ್ನಾಟಕದ ನಾಯಕತ್ವವನ್ನು ಪ್ರತಿಫಲಿಸಲು ಇದೊಂದು ವೇದಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಯೋಜನೆಗಳನ್ನು ರೂಪಿಸಬಹುದಾಗಿದೆ ಎಂದರು.

ಬ್ರಿಟಿಷ್ ಕೌನ್ಸಿಲ್‍ನ (ಭಾರತ) ನಿರ್ದೇಶಕರಾದ ಬಾರ್ಬರಾ ವಿಕ್‍ಹ್ಯಾಮ್  ಮಾತನಾಡಿ, ಈ ಒಪ್ಪಂದವು ಭಾರತ ಸರ್ಕಾರ ಮತ್ತು ಯುಕೆ ನಡುವಿನ ಶೈಕ್ಷಣಿಕ ಸಂಬಂಧವನ್ನು ಸುಭದ್ರಗೊಳಿಸುವುದರ ಜೊತೆಗೆ ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ-2020 ರಲ್ಲಿ ತಿಳಿಸಲಾಗಿರುವ ಜ್ಞಾನ ವರ್ಧನೆಯ ಆಶಯವನ್ನು ಬೆಂಬಲಿಸಲಿದೆ ಎಂದರು. ಕರ್ನಾಟಕದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು  ಸೃಜಿಸಿ  ರಾಜ್ಯ ಸರ್ಕಾರದ ಗುಣಮಟ್ಟವುಳ್ಳ ಉನ್ನತ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ತಲುಪಲು ನೆರವಾಗಲಿದೆ ಎಂದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಮಾತನಾಡಿ, ಶಿಕ್ಷಣದಲ್ಲಿ ಮಹತ್ವದ ಬದಲಾವಣೆಯನ್ನು ತರಲು ಭಾರತ ಸನ್ನದ್ಧವಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯು ಇದಕ್ಕೆ ಪೂರಕವಾದ ಅವಕಾಶವನ್ನು ಕಲ್ಪಿಸಲಿದೆ ಎಂದರು. ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದ್ದು, ಬ್ರಿಟಿಷ್ ಕೌನ್ಸಿಲ್ ಮೂಲಕ ಯುಕೆ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗಿನ ಸಹಯೋಗ ಸಮಯೋಚಿತವಾಗಿದೆ ಎಂದರು. ಯೋಜಿತ ಕ್ರಮಗಳ ಮೂಲಕ ಉನ್ನತ ಶಿಕ್ಷಣದ ಪಾಲುದಾರರಿಗೆ ಹೆಚ್ಚಿನ ಲಾಭವನ್ನು ಈ ಸಹಯೋಗ ಮಾಡಿಕೊಡಲಿದೆ ಎಂದು ಅಭಿಪ್ರಾಯಪಟ್ಟರು.

ಯುಕೆ ವಿದೇಶಾಂಗ, ಕಾಮನ್ ವೆಲ್ತ್ ಮತ್ತು ಅಭಿವೃದ್ಧಿ ವ್ಯವಹಾರಗಳ ಸಚಿವ ಡಾಮಿನಿಕ್ ರಾಬ್, ಬ್ರಿಟಿಷ್ ಕೌನ್ಸಿಲ್ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com