ಕೊಳ್ಳೇಗಾಲ ಸಮೀಪ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಲಾರಿ
ಕೊಳ್ಳೇಗಾಲ ಸಮೀಪ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಲಾರಿ

ಕೊಳ್ಳೇಗಾಲ ಸಮೀಪ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಲಾರಿ: ಚಾಲಕ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿಯೊಂದು ಹಳ್ಳಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಮುಡಿಗುಂಡ ಗ್ರಾಮದ ಸೇತುವೆ ಬಳಿ ಬುಧವಾರ ನಡೆದಿದೆ.

ಕೊಳ್ಳೇಗಾಲ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿಯೊಂದು ಹಳ್ಳಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಮುಡಿಗುಂಡ ಗ್ರಾಮದ ಸೇತುವೆ ಬಳಿ ಬುಧವಾರ ನಡೆದಿದೆ.

ತಮಿಳುನಾಡಿನ ಊಟಿಯ ನಿವಾಸಿ ಕಾರ್ತಿಕ್ (28) ಮೃತ ವ್ಯಕ್ತಿ. ಈತ ಬೆಂಗಳೂರಿನ ಯಶವಂತಪುರದಿಂದ ಲಾರಿಯಲ್ಲಿ ಆಲೂಗಡ್ಡೆ ತುಂಬಿಕೊಂಡು ಬರುತ್ತಿದ್ದ ವೇಳೆ ತಾಲೂಕಿನ ಮುಡಿಗುಂಡ ಸೇತುವೆ ಬಳಿ ಈ ಅವಘಡ ಸಂಭವಿಸಿದೆ. ಮೃತದೇಹವನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಸ್ಥಳಕ್ಕೆ ಡಿವೈಎಸ್​ಪಿ ನಾಗರಾಜು, ಸಿಪಿಐ ಶ್ರೀಕಾಂತ್ ಭೇಟಿ ನೀಡಿ ಪರಿಶೀಲಿಸಿದರು.

ವರದಿ: ಗುಳಿಪುರ ನಂದೀಶ

Related Stories

No stories found.

Advertisement

X
Kannada Prabha
www.kannadaprabha.com