ಮಂಗಳೂರು: ಮಗನಿಂದ ಹಲ್ಲೆಗೊಳಗಾದ ವೃದ್ದ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ವೃದ್ದನೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.
ಮಂಗಳೂರು: ಮಗನಿಂದ ಹಲ್ಲೆಗೊಳಗಾದ ವೃದ್ದ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
Updated on

ಮಂಗಳೂರು: ವೃದ್ದನೊಬ್ಬ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.

ಮಗನು ಹಲ್ಲೆ ಮಾಡಿದ್ದಾನೆಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಬಂದಡ್ಕದ ನಿವಾಸಿ ಲಕ್ಷ್ಮಣ ಗೌಡ (69) ಆತ್ಮಹತ್ಯೆ ಮಾಡಿಕೊಂಡ ವೃದ್ದ.

ಡಿಸೆಂಬರ್ 1 ರಂದು, ಲಕ್ಷ್ಮಣ ಮತ್ತು ಅವರ ಮಗನ ನಡುವೆ ನಿರ್ದಿಷ್ಟ ಕಾರಣಕ್ಕೆ ಜಗಳವಾಗಿದೆ. ಈ ಸಮಯದಲ್ಲಿ ಮಗನು ತನ್ನ ತಂದೆಯ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ಲಕ್ಷ್ಮಣ ಗೌಡನನ್ನು ಪಟ್ಟಣದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಡಿಸೆಂಬರ್ 19 ರಂದು, ಸೊಸೆ ಆಹಾರವನ್ನು ತರಲು ಹೊರಹೋದ ವೇಳೆ ಲಕ್ಷ್ಮಣ ಗೌಡ ತಾನು ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ.

ಮೃತರ ಪತ್ನಿ ಲಲಿತಾ ಸಲ್ಲಿಸಿದ ದೂರಿನ ಪ್ರಕಾರ, ಲಕ್ಷ್ಮಣ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮಾನಸಿಕ ಅಸ್ವಸ್ಥ ಮಗ ಮತ್ತು ಸೊಸೆ ನಿರಂತರವಾಗಿ ಜಗಳವಾಡುತ್ತಿದ್ದರು ಹಾಗೂ ಮನೆಯಲ್ಲಿ ಅಸಹನೀಯ ವಾತಾವರಣ ಸೃಷ್ಟಿಸುತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com