ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ರಾಮನಗರದ ಐವರು ಮಹಿಳೆಯರು ದುರ್ಮರಣ

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ರಾಮನಗರ: ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಕನಕಪುರ ತಾಲೂಕಿನ ಕಸಬಾ ಹೋಬಳಿ ಕೆರಳಾಳುಸಂದ್ರ ಗ್ರಾಮದ ನಿವಾಸಿಗಳಾದ ಮಲ್ಲಯ್ಯನವರ ಪತ್ನಿ ಈರಮ್ಮ(85), ಹಳೆಬೀದಿಯ ಹೊಸಬಮ್ಮ(75), ವೆಂಕಟೇಗೌಡರ ಪತ್ನಿ ಪುಟ್ಟನಿಂಗಮ್ಮ(60), ಜಗದೀಶ್‌ ಎಂಬವರ ಪತ್ನಿ ಗೌರಮ್ಮ(60), ಮಂಜುನಾಥ್‌ ಎಂಬವರ ಪತ್ನಿ ಮಂಗಳಾ(25) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕೆರಳಾಳುಸಂದ್ರ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಗುಳೇಶ್ವರ ದೇವಾಲಯಕ್ಕೆ ಹೋಗಿದ್ದಾಗ  ಈ ದುರ್ಘಟನೆ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com