ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೋವಿಡ್‌ ಕಡಿಮೆ ಇರುವ ತಾಲೂಕುಗಳಲ್ಲಿ ಶಾಲೆ ಆರಂಭಿಸುವ ಕುರಿತು ಚಿಂತಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಕೋವಿಡ್ ಪ್ರಕರಣಗಳು ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚಿಂತನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.
Published on

ಬೆಂಗಳೂರು: ಕೋವಿಡ್ ಪ್ರಕರಣಗಳು ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚಿಂತನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ವಕೀಲ ಎ.ಎ. ಸಂಜೀವ್ ನರೇನ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಶಾಲೆ ಪುನರಾರಂಭಿಸಲು ರಾಜ್ಯದಾದ್ಯಂತ ಏಕರೂಪ ನೀತಿ ಅನುಸರಿಸುವ ಬದಲು ಹಂತ–ಹಂತವಾಗಿ ತೆರೆಯಲು ಸಾಧ್ಯವೇ ಎಂಬುದರ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ನಿರ್ದೇಶಿಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲರು, 2021ರ ಜನವರಿ 1ರಿಂದ ರಾಜ್ಯದ ಎಲ್ಲ ಶಾಲೆಗಳಲ್ಲೂ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ಕಾರ್ಯಕ್ರಮ ಪುನರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com