ಧಾರವಾಡ: ಚುನಾವಣೆ ದಿನವೇ ಗ್ರಾಮ ಪಂಚಾಯಿತಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು

ಗ್ರಾಮ ಪಂಚಾಯತಿ ಚುನಾವಣೆ ದಿನವೇ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆ ದಿನವೇ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. 

ದಾಮೋದರ ಯಲಿಗಾರ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಗರಗ ಗ್ರಾಮದ 2ನೇ ವಾರ್ಡ್ ನ ಅಭ್ಯರ್ಥಿಯಾಗಿ‌ ದಾಮೋದರ ಯಲಿಗಾರ ಅವರು ಕಣಕ್ಕಿಳಿದಿದ್ದರು. ಆದರೆ, ಚುನಾವಣೆ ದಿನವೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆಯೇ ಯಲಿಗಾರ ಅವರ ಬೆಂಬಲಿಗರು ಹಾಗೂ ಗ್ರಾಮಸ್ಥರು ನಿವಾಸಕ್ಕೆ ಆಗಿಮಿಸಿದ್ದಾರೆ. 

ಈ ನಡುವೆ ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ. ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com